ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

23 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago