ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

9 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago