ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago