ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago