ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

8 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

8 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

9 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

13 hours ago