ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

6 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

9 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

17 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

19 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago