ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

4 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

18 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

18 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

18 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago