ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago