ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago