Categories: ಕೋಲಾರ

ಶಾಸಕ ಸ್ಥಾನ ವಂಚಿತ ಕೆ.ಶ್ರೀನಿವಾಸಗೌಡರಿಗೆ ಸೂಕ್ತ ಸ್ಥಾನಮಾನಕ್ಕೆ ಊರಬಾಗಿಲು ಶ್ರೀನಿವಾಸ್ ಒತ್ತಾಯ

ಕೋಲಾರ: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಅಂತಾರಾಷ್ಟ್ರೀಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರು ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಅವರ ತ್ಯಾಗಕ್ಕೆ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಸೋಮವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಕೆ.ಶ್ರೀನಿವಾಸಗೌಡರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಹಕಾರಿ ಧುರೀಣರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತವನ್ನು ಹೊಂದಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಕಾರಣದಿಂದ ನಿಲ್ಲುವುದಿಲ್ಲ ಎಂದರು ಆಗ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕಾಗಿತ್ತು ಆದರೂ ಅವರು ತ್ಯಾಗ ಮಾಡಿ ಬೇರೆಯವರಿಗೆ ಬಿಟ್ಟು ಕೊಟ್ಟು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿದ್ದಾರೆ. ಅಂತಹವರಿಗೆ ಮುಂದಿನ ದಿನಗಳಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ನಾಯಕರು ಅವರನ್ನು ಎಂಎಲ್ಸಿ ಮಾಡಿ ನ್ಯಾಯ ಒದಗಿಸಬೇಕಾಗಿದೆ ಎಂದರು.

ಕೋಲಾರ ತಾಲೂಕಿನ ಅಣ್ಣಿಹಳ್ಳಿ ಸೊಸೈಟಿ ಮೂಲಕ ಸಹಕಾರಿ ಕ್ಷೇತ್ರಕ್ಕೆ ಬಂದು ತಾಲೂಕು ಜಿಲ್ಲಾ ಪರಿಷತ್ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದಾರೆ. ನವದೆಹಲಿಯ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇವರು ಸಂಸ್ಥೆಯ ಅಧ್ಯಕ್ಷರಾಗಿ ರೈತರಿಗೆ ವಿಧ್ಯಾರ್ಥಿಗಳಿಗೆ ಶಿಕ್ಷಣ ಆರೋಗ್ಯಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ತಮ್ಮ ಸಹಕಾರಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಯಾವುದೇ ಕಪ್ಪುಚುಕ್ಕೆ ತರದ ರೀತಿಯಲ್ಲಿ ತಮ್ಮದೇ ಆದ ಹಿಡಿತವನ್ನು ಸಾಧಿಸಿದ್ದಾರೆ ಇಂತಹವರಿಗೆ ಸರಕಾರ ಗುರುತಿಸಿ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಸರಕಾರವನ್ನು ಒತ್ತಾಯಿಸಿದರು

ಈ ಸಂದರ್ಭದಲ್ಲಿ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಮುಖಂಡರಾದ ನಾಗರಾಜಗೌಡ, ಹಾರೋಹಳ್ಳಿ ಶ್ರೀನಿವಾಸ್, ನಾಗೇಶ್, ರಾಮಣ್ಣ, ತ್ಯಾಗರಾಜ್, ಹರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago