Categories: ಕೋಲಾರ

ಶಾಸಕ ಸ್ಥಾನ ವಂಚಿತ ಕೆ.ಶ್ರೀನಿವಾಸಗೌಡರಿಗೆ ಸೂಕ್ತ ಸ್ಥಾನಮಾನಕ್ಕೆ ಊರಬಾಗಿಲು ಶ್ರೀನಿವಾಸ್ ಒತ್ತಾಯ

ಕೋಲಾರ: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಅಂತಾರಾಷ್ಟ್ರೀಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರು ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಅವರ ತ್ಯಾಗಕ್ಕೆ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಸೋಮವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಕೆ.ಶ್ರೀನಿವಾಸಗೌಡರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಹಕಾರಿ ಧುರೀಣರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತವನ್ನು ಹೊಂದಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಕಾರಣದಿಂದ ನಿಲ್ಲುವುದಿಲ್ಲ ಎಂದರು ಆಗ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕಾಗಿತ್ತು ಆದರೂ ಅವರು ತ್ಯಾಗ ಮಾಡಿ ಬೇರೆಯವರಿಗೆ ಬಿಟ್ಟು ಕೊಟ್ಟು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿದ್ದಾರೆ. ಅಂತಹವರಿಗೆ ಮುಂದಿನ ದಿನಗಳಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ನಾಯಕರು ಅವರನ್ನು ಎಂಎಲ್ಸಿ ಮಾಡಿ ನ್ಯಾಯ ಒದಗಿಸಬೇಕಾಗಿದೆ ಎಂದರು.

ಕೋಲಾರ ತಾಲೂಕಿನ ಅಣ್ಣಿಹಳ್ಳಿ ಸೊಸೈಟಿ ಮೂಲಕ ಸಹಕಾರಿ ಕ್ಷೇತ್ರಕ್ಕೆ ಬಂದು ತಾಲೂಕು ಜಿಲ್ಲಾ ಪರಿಷತ್ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದಾರೆ. ನವದೆಹಲಿಯ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇವರು ಸಂಸ್ಥೆಯ ಅಧ್ಯಕ್ಷರಾಗಿ ರೈತರಿಗೆ ವಿಧ್ಯಾರ್ಥಿಗಳಿಗೆ ಶಿಕ್ಷಣ ಆರೋಗ್ಯಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ತಮ್ಮ ಸಹಕಾರಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಯಾವುದೇ ಕಪ್ಪುಚುಕ್ಕೆ ತರದ ರೀತಿಯಲ್ಲಿ ತಮ್ಮದೇ ಆದ ಹಿಡಿತವನ್ನು ಸಾಧಿಸಿದ್ದಾರೆ ಇಂತಹವರಿಗೆ ಸರಕಾರ ಗುರುತಿಸಿ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಸರಕಾರವನ್ನು ಒತ್ತಾಯಿಸಿದರು

ಈ ಸಂದರ್ಭದಲ್ಲಿ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಮುಖಂಡರಾದ ನಾಗರಾಜಗೌಡ, ಹಾರೋಹಳ್ಳಿ ಶ್ರೀನಿವಾಸ್, ನಾಗೇಶ್, ರಾಮಣ್ಣ, ತ್ಯಾಗರಾಜ್, ಹರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago