‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಳ್ಳುವ ಗುಣವೂ ಅತ್ಯಗತ್ಯವಾಗಿದೆ ಎಂದು ಶ್ರೀ ದೇವರಾಜ್ ಅರಸ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.

ಶ್ರೀ ದೇವರಾಜ್ ಅರಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದಿನ ಶಿಕ್ಷಣ ಪದ್ಧತಿಗೂ ಇಂದಿನ ಶಿಕ್ಷಣ ಪದ್ಧತಿಗೂ ಬಹಳಷ್ಟು ವ್ಯತ್ಯಾಸವಿದೆ. ತಂತ್ರಜ್ಞಾನ ಬೆಳೆಯುತ್ತಿದ್ದಂತೆ ವಿದ್ಯಾರ್ಥಿಗಳ ಆಲೋಚನಾ ಕ್ರಮ, ಕಲಿಕೆಯ ವಿಧಾನ ಹಾಗೂ ನಿರೀಕ್ಷೆಗಳಲ್ಲಿಯೂ ಬದಲಾವಣೆಯಾಗಿದೆ. ಆದ್ದರಿಂದ ಇಂದಿನ ಶಿಕ್ಷಕರು ಮೊದಲು ‘ತಾಳ್ಮೆ’ ಎಂಬ ಪಾಠವನ್ನು ಕಲಿತು, ನಂತರ ಅದನ್ನು ತಮ್ಮ ನಡೆ-ನುಡಿಯ ಮೂಲಕ ಯುವಪೀಳಿಗೆಗೆ ಕಲಿಸುವ ಅನಿವಾರ್ಯತೆ ಇದೆ ಎಂದರು.

ವಿದ್ಯಾರ್ಥಿಗಳನ್ನು ಕೇವಲ ಪಾಠದ ಮೂಲಕ ರೂಪಿಸಲು ಸಾಧ್ಯವಿಲ್ಲ. ಪ್ರೀತಿ, ವಿಶ್ವಾಸ, ನಯವಾದ ಮಾತು ಹಾಗೂ ಉತ್ತಮ ನಡವಳಿಕೆಯ ಮೂಲಕ ಅವರಲ್ಲಿ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರ ಮಾತು, ನಡೆ ಮತ್ತು ವ್ಯಕ್ತಿತ್ವವು ವಿದ್ಯಾರ್ಥಿಗಳ ಮೇಲೆ ಆಳವಾದ ಪ್ರಭಾವ ಬೀರುತ್ತದೆ ಎಂದು ತಿಳಿಸಿದರು.

ಇಂದು ಕೃತಕ ಬುದ್ಧಿಮತ್ತೆ ಸೇರಿದಂತೆ ಅನೇಕ ಹೊಸ ತಂತ್ರಜ್ಞಾನಗಳು ಶಿಕ್ಷಣ ಕ್ಷೇತ್ರವನ್ನು ಪ್ರವೇಶಿಸಿವೆ. ಅವು ಕಲಿಕೆಗೆ ನೆರವಾಗುವುದರ ಜೊತೆಗೆ ಜ್ಞಾನವನ್ನು ವೇಗವಾಗಿ ಒದಗಿಸಬಲ್ಲವು. ಆದರೆ ವಿದ್ಯಾರ್ಥಿಯ ಮನಸ್ಸನ್ನು ಅರ್ಥಮಾಡಿಕೊಂಡು, ತಪ್ಪುಗಳನ್ನು ತಿದ್ದಿ, ಬದುಕಿನ ಮೌಲ್ಯಗಳನ್ನು ಕಲಿಸಿ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ಸಂಪೂರ್ಣವಾಗಿ ತುಂಬಲು ಸಾಧ್ಯವಿಲ್ಲ,
ಎಷ್ಟೇ ಎಐ ಬಂದರೂ, ಎಷ್ಟೇ ತಂತ್ರಜ್ಞಾನ ಬೆಳೆದರೂ ಶಿಕ್ಷಕರೇ ಶಿಕ್ಷಣದ ಮೂಲ, ಮಾರ್ಗದರ್ಶಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೌರ್ನಿಂಗ್ ಸಮಿತಿಯ ಸದಸ್ಯರಾದ ವಿದ್ವತ್, ಉತ್ತಮ್ ಕುಮಾರ್ ಎನ್, ಪ್ರಾಂಶುಪಾಲರಾದ ಧನಂಜಯ್, ಡಾ. ಗೌರಪ್ಪ, ಡಾ. ಚಿಕ್ಕಣ್ಣ, ಜಿಯಾ ವುಲ್ಲಾಖಾನ್, ಉಪಪ್ರಾಂಶುಪಾಲರಾದ ದಕ್ಷಿಣಮೂರ್ತಿ, ಮ್ಯಾನೇಜರ್ ರವಿಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

24 hours ago