ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಮಾಡಲು ನಮೂನೆ-19 ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

ಜಿಲ್ಲೆಯಲ್ಲಿ ನಮೂನೆ-19ರ ಅರ್ಜಿಗಳನ್ನು ಸ್ವೀಕರಿಸುವವರು:

*ದೊಡ್ಡಬಳ್ಳಾಪುರ ತಾಲ್ಲೂಕು*
ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂರವಾಣಿ ಸಂಖ್ಯೆ 080-27622208, ಮೊಬೈಲ್ ನಂ: 9480695013.
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ತಾಲ್ಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ ಸಂಖ್ಯೆ 080-27622002, ಮೊಬೈಲ್ ನಂ: 9448346792

*ದೇವನಹಳ್ಳಿ ತಾಲ್ಲೂಕು*
ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-27682384, ಮೊಬೈಲ್ ನಂ: 9480695012
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-22122999, ಮೊಬೈಲ್ ನಂ:6363263117

*ಹೊಸಕೋಟೆ ತಾಲ್ಲೂಕು*
ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಛೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931311 ಮೊಬೈಲ್ ನಂ: 9480695014
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931237,ಮೊಬೈಲ್ ನಂ:9845637542

*ನೆಲಮಂಗಲ ತಾಲ್ಲೂಕು*
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಓ ಕಛೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊಬೈಲ್ ನಂ: 9480695015
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂರವಾಣಿ ಸಂಖ್ಯೆ:080-27722126, ಮೊಬೈಲ್ ನಂ: 8147397189

*ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಾಯಿಸಲು ಮಾನದಂಡಗಳು*

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.
ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.

ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.
ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು
ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

7 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

7 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

12 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

14 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

18 hours ago