ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಮತದಾರರ ಪಟ್ಟಿಗಳ ಕರಡು ಪ್ರತಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಡಿ.9 ಕೊನೆ ದಿನ: ಇದುವರೆಗೆ 1721 ಶಿಕ್ಷಕರು, 14375 ಪದವೀಧರರು ನೋಂದಣಿ

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಇಂದು(ನವೆಂಬರ್ 23) ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ 2023 ರ ಸೆಪ್ಟೆಂಬರ್ 30ರಂದು ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ಇಂದು(2023 ರ ನವೆಂಬರ್ 23) ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ 2023ರ ಡಿಸೆಂಬರ್ 09ರೊಳಗಾಗಿ ಆಯಾ ತಾಲೂಕಿನ ತಾಹಶೀಲ್ದಾರ್ ಹಾಗೂ ಸಹಾಯಕ ಮತದಾನದ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಅಂತಿಮ ಮತದಾರರ ಪಟ್ಟಿಗಳನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಿದರು.

ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಇದುವರೆಗೂ 855 ಪುರುಷ ಶಿಕ್ಷಕರು ಹಾಗೂ 266 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 1721 ಶಿಕ್ಷಕರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ ಇದುವರೆಗೆ 7509 ಪುರುಷ ಮತದಾರರು ಹಾಗೂ 6864 ಮಹಿಳಾ ಮತದಾರರು ಸೇರಿ 14375 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ಇಲಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಶಿವಶಂಕರ.ಎನ್ ಅವರು ಮನವಿ ಮಾಡಿದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

6 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

7 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

7 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

7 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

10 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

11 hours ago