ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಮತದಾರರ ಪಟ್ಟಿಗಳ ಕರಡು ಪ್ರತಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಡಿ.9 ಕೊನೆ ದಿನ: ಇದುವರೆಗೆ 1721 ಶಿಕ್ಷಕರು, 14375 ಪದವೀಧರರು ನೋಂದಣಿ

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಇಂದು(ನವೆಂಬರ್ 23) ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ 2023 ರ ಸೆಪ್ಟೆಂಬರ್ 30ರಂದು ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ಇಂದು(2023 ರ ನವೆಂಬರ್ 23) ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ 2023ರ ಡಿಸೆಂಬರ್ 09ರೊಳಗಾಗಿ ಆಯಾ ತಾಲೂಕಿನ ತಾಹಶೀಲ್ದಾರ್ ಹಾಗೂ ಸಹಾಯಕ ಮತದಾನದ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಅಂತಿಮ ಮತದಾರರ ಪಟ್ಟಿಗಳನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಿದರು.

ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಇದುವರೆಗೂ 855 ಪುರುಷ ಶಿಕ್ಷಕರು ಹಾಗೂ 266 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 1721 ಶಿಕ್ಷಕರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ ಇದುವರೆಗೆ 7509 ಪುರುಷ ಮತದಾರರು ಹಾಗೂ 6864 ಮಹಿಳಾ ಮತದಾರರು ಸೇರಿ 14375 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ಇಲಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಶಿವಶಂಕರ.ಎನ್ ಅವರು ಮನವಿ ಮಾಡಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago