ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಬಗಹರಿಸಲು ಸಂಘಟಿತ ಹೋರಾಟ ಮಾಡೋಣ-ವಿಧಾನಪರಿಷತ್ ಸದಸ್ಯ ಪುಟ್ಟಣ್ಣ

ಕರ್ನಾಟಕ ರಾಜ್ಯದ ಶಿಕ್ಷಕರ ಮತ್ತು ಉಪನ್ಯಾಸಕರ  ಸಮಸ್ಯೆಗಳನ್ನು ಬಗಹರಿಸಲು ಸಂಘಟಿತ ಹೋರಾಟ ಮಾಡೋಣ ಎಂದು ವಿಧಾನಪರಿಷತ್ತು ಸದಸ್ಯ ಪುಟ್ಟಣ್ಣ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರ ಸಮಾಜದ ಪ್ರಮುಖ ಅಂಗವಾಗಿದ್ದೂ, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಅವರ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ಶಿಕ್ಷಕ ಕ್ಷೇತ್ರದ ಪ್ರತಿನಿಧಿಯಾದ ನಾನು ಸದಾ ನಿಮ್ಮ ಜತೆಯಲ್ಲಿ ಇರುತ್ತೇನೆ. ಜನರು ದೇವಾಲಯಗಳನ್ನು ಕಟ್ಟುವ ಉತ್ಸಾಹವನ್ನು  ಶಾಲಾ ಕಾಲೇಜುಗಳನ್ನು ಕಟ್ಟುವ  ಕಡೆಗೆ ನೀಡಬೇಕಾಗಿದೆ ಎಂದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಿ.ಕೆ.ಸರಸ್ವತಿ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ದಗೊಳಿಸಲು ಸ್ಮಾರ್ಟ್ ಕ್ಲಾಸ್ ತರಗತಿಗಳ ಅಗತ್ಯವಿದೆ. ಆದ್ದರಿಂದ ವಿಧಾನ ಪರಿಷತ್ತು ಸದಸ್ಯರಾದ ಪುಟ್ಟಣ್ಣ ಅವರು ತಮ್ಮ ಶಾಸಕರ ಅನುದಾನದಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ನಿರ್ಮಿಸಿ ಮಾಡಿಕೊಡಬೇಕೆಂದರು.

ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಬೋರಪ್ಪ ಮಾತನಾಡಿ, ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಇಡಿ ರಹಿತ ಉಪನ್ಯಾಸಕರುಗಳಿಗೆ ವೇತನ ಸಹಿತವಾಗಿ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ ನೀಡಬೇಕಾಗಿದೆ. ನೂರಾರು ಮಂದಿ ಬಿ.ಇಡಿ ರಹಿತ ಉಪನ್ಯಾಸಕರು ಪ್ರಸ್ತುತ ಆತಂಕದ ಸ್ಥಿತಿಯಲ್ಲಿದ್ದಾರೆ. ವಿಧಾನ ಪರಿಷತ್ತು ಸದಸ್ಯರುಗಳು ಬಿ.ಇಡಿ ರಹಿತರ ಸಮಸ್ಯೆಯನ್ನು ಬಗೆಹರಿಸಲು ಸಹಕಾರ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್, ದೊಡ್ಡಬಳ್ಳಾಪುರ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಮೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ರಾಜಶೇಖರ್, ಕಾರ್ಯದರ್ಶಿ ಧನಂಜಯ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಆರ್.ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ  ಶಿಕ್ಷಕ‌ ಮತ್ತು‌ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳಾದ  ರಾಮಚಂದ್ರಗೌಡ, ಮುನಿಕೃಷ್ಣಪ್ಪ, ಅರುಣ್ ಕುಮಾರ್,  ಜೈಕುಮಾರ್, ಬಿ.ಆರ್.ನರಸಿಂಹಮೂರ್ತಿ, ದಾಕ್ಷಾಯಿಣಿ, ಟಿ.ಕೆ.ಪ್ರಕಾಶ್, ಚಿಕ್ಕಗೌಡ, ಎ.ವಿ.ಚಂದ್ರಪ್ಪ,  ಬಸವಲಿಂಗಯ್ಯ, ಮಹೇಶ್, ಸರಸ್ವತಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

1 hour ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

11 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

22 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago