ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಬಗಹರಿಸಲು ಸಂಘಟಿತ ಹೋರಾಟ ಮಾಡೋಣ-ವಿಧಾನಪರಿಷತ್ ಸದಸ್ಯ ಪುಟ್ಟಣ್ಣ

ಕರ್ನಾಟಕ ರಾಜ್ಯದ ಶಿಕ್ಷಕರ ಮತ್ತು ಉಪನ್ಯಾಸಕರ  ಸಮಸ್ಯೆಗಳನ್ನು ಬಗಹರಿಸಲು ಸಂಘಟಿತ ಹೋರಾಟ ಮಾಡೋಣ ಎಂದು ವಿಧಾನಪರಿಷತ್ತು ಸದಸ್ಯ ಪುಟ್ಟಣ್ಣ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರ ಸಮಾಜದ ಪ್ರಮುಖ ಅಂಗವಾಗಿದ್ದೂ, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಅವರ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ಶಿಕ್ಷಕ ಕ್ಷೇತ್ರದ ಪ್ರತಿನಿಧಿಯಾದ ನಾನು ಸದಾ ನಿಮ್ಮ ಜತೆಯಲ್ಲಿ ಇರುತ್ತೇನೆ. ಜನರು ದೇವಾಲಯಗಳನ್ನು ಕಟ್ಟುವ ಉತ್ಸಾಹವನ್ನು  ಶಾಲಾ ಕಾಲೇಜುಗಳನ್ನು ಕಟ್ಟುವ  ಕಡೆಗೆ ನೀಡಬೇಕಾಗಿದೆ ಎಂದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಿ.ಕೆ.ಸರಸ್ವತಿ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ದಗೊಳಿಸಲು ಸ್ಮಾರ್ಟ್ ಕ್ಲಾಸ್ ತರಗತಿಗಳ ಅಗತ್ಯವಿದೆ. ಆದ್ದರಿಂದ ವಿಧಾನ ಪರಿಷತ್ತು ಸದಸ್ಯರಾದ ಪುಟ್ಟಣ್ಣ ಅವರು ತಮ್ಮ ಶಾಸಕರ ಅನುದಾನದಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ನಿರ್ಮಿಸಿ ಮಾಡಿಕೊಡಬೇಕೆಂದರು.

ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಬೋರಪ್ಪ ಮಾತನಾಡಿ, ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಇಡಿ ರಹಿತ ಉಪನ್ಯಾಸಕರುಗಳಿಗೆ ವೇತನ ಸಹಿತವಾಗಿ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ ನೀಡಬೇಕಾಗಿದೆ. ನೂರಾರು ಮಂದಿ ಬಿ.ಇಡಿ ರಹಿತ ಉಪನ್ಯಾಸಕರು ಪ್ರಸ್ತುತ ಆತಂಕದ ಸ್ಥಿತಿಯಲ್ಲಿದ್ದಾರೆ. ವಿಧಾನ ಪರಿಷತ್ತು ಸದಸ್ಯರುಗಳು ಬಿ.ಇಡಿ ರಹಿತರ ಸಮಸ್ಯೆಯನ್ನು ಬಗೆಹರಿಸಲು ಸಹಕಾರ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್, ದೊಡ್ಡಬಳ್ಳಾಪುರ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಮೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ರಾಜಶೇಖರ್, ಕಾರ್ಯದರ್ಶಿ ಧನಂಜಯ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಆರ್.ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ  ಶಿಕ್ಷಕ‌ ಮತ್ತು‌ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳಾದ  ರಾಮಚಂದ್ರಗೌಡ, ಮುನಿಕೃಷ್ಣಪ್ಪ, ಅರುಣ್ ಕುಮಾರ್,  ಜೈಕುಮಾರ್, ಬಿ.ಆರ್.ನರಸಿಂಹಮೂರ್ತಿ, ದಾಕ್ಷಾಯಿಣಿ, ಟಿ.ಕೆ.ಪ್ರಕಾಶ್, ಚಿಕ್ಕಗೌಡ, ಎ.ವಿ.ಚಂದ್ರಪ್ಪ,  ಬಸವಲಿಂಗಯ್ಯ, ಮಹೇಶ್, ಸರಸ್ವತಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago