Categories: ಕೋಲಾರ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬುಧವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಚುನಾವಣಾ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು.

ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆಯೂ ಕಾಂಗ್ರೆಸ್ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರವು ಅಭಿವೃದ್ದಿಯಾಗಬೇಕಿದೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಅವರನ್ನು ವಿಧಾನ ಪರಿಷತ್ತಿಗೆ ಕಳಸಿಕೊಡಿ ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರನ್ನು ಜಿಲ್ಲೆಗೆ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಗಮನ ಹರಿಸಲಾಗುತ್ತದೆ ಎಂದರು.

ಕ್ಷೇತ್ರದಲ್ಲಿ ಸುಮಾರು 18 ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ.ಆದರೆ ಕಾಂಗ್ರೆಸ್ ನೇತೃತ್ವದ ಸರಕಾರವು ಬೌದ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಸರಕಾರದ ಪರವಾಗಿ ಇದ್ದವರನ್ನು ಆಯ್ಕೆ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಮತ್ತು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹೂಹಳ್ಳಿ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ವೈ.ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಇದ್ದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

11 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

11 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago