Categories: ಕೋಲಾರ

ಶಿಕ್ಷಕಿ ಮೇಲೆ ಹಲ್ಲೆ ಸರ್ಕಾರಿ‌ ನೌಕರರ ಸಂಘ ಖಂಡನೆ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ‌ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.

ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ

Ramesh Babu

Journalist

View Comments

  • ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

3 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

3 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

6 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

14 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

16 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago