ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
View Comments
ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು