ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
View Comments
ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು