ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
View Comments
ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು