Categories: ಕೋಲಾರ

ಶಿಕ್ಷಕಿ ಮೇಲೆ ಹಲ್ಲೆ ಸರ್ಕಾರಿ‌ ನೌಕರರ ಸಂಘ ಖಂಡನೆ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ‌ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.

ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ

Ramesh Babu

Journalist

View Comments

  • ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು

Recent Posts

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

12 minutes ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

5 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

11 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

12 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago

ಫಿಫಾ ವಿಶ್ವಕಪ್‌ಗೆ ಸ್ಪೇನ್ ಮುತ್ತು: ಫೈನಲ್‌ನಲ್ಲಿ ಅರ್ಜೆಂಟೀನಾಗೆ 1-0 ಸೋಲು ಹೆಚ್ಚುವರಿ ವೇಳೆಯಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು; 2010ರ ಬಳಿಕ ಎರಡನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್‌ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…

2 days ago