ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…
ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್ಗಳು ಸುಟ್ಟು ಕರಕಲಾದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…
View Comments
ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು