Categories: ಕೋಲಾರ

ಶಿಕ್ಷಣದ ಖಾಸಗೀಕರಣದ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟಕ್ಕೆ ಸಿದ್ಧ- ಅಂಬ್ಲಿಕಲ್ ಶಿವಪ್ಪ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುವ ಮೂಲಕ ಖಾಸಗೀಕರಣ ಮಾಡಲು ಹೊರಟಿದ್ದು ಇದರ ವಿರುದ್ದವಾಗಿ ಎಸ್ಎಫ್ಐ ಸಂಘಟನೆಯು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಇದ್ದು ನಿರಂತರ ಹೋರಾಟಕ್ಕೆ ಸಿದ್ದವಿದೆ ಎಂದು ಸಂಘಟನೆಯ ನೂತನ ರಾಜ್ಯ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಶೈಕ್ಷಣಿಕ ಕ್ಷೇತ್ರವು ಶ್ರೀಮಂತರ ಪಾಲಾಗುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ವಿದ್ಯಾರ್ಥಿಗಳು ಚಳವಳಿಯ ಮೂಲಕ ಸಮಾನ ಶಿಕ್ಷಣಕ್ಕಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.

ಸಮಾನ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಗಳು ಬಜೆಟ್‌ನಲ್ಲಿ ಅಗತ್ಯ ಹಣ ಮೀಸಲಿರಿಸಬೇಕು.ಎಲ್ಲ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಮತ್ತು ಮೂಲ ಸೌಲಭ್ಯಕ್ಕೆ ಉತ್ತೇಜನ ನೀಡಬೇಕು. ಸಂವಿಧಾನದ ಆಶಯದಂತೆ ವಿವಿಧತೆಯಲ್ಲಿ ಏಕತೆಯ ಸೌಹಾರ್ದ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ ಯಾವುದೇ ರೀತಿಯ ತಾರತಮ್ಯವಿಲ್ಲದ ಶೈಕ್ಷಣಿಕ ವಾತಾವರಣದ ನಿರ್ಮಾಣವಾಗಬೇಕು ಖಾಸಗಿ ರಂಗದಲ್ಲಿ ಮೀಸಲಾತಿಗೆ ಒತ್ತಾಯ. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಐಕ್ಯತೆ ಉಳಿವಿಗಾಗಿ ಯೋಜನೆ ರೂಪಿಸುವುದು ಸಮ್ಮೇಳನದ ಮುಖ್ಯ ಧ್ಯೇಯಗಳಾಗಿವೆ ಎಂದು ತಿಳಿಸಿದರು.

ಸಂಘಟನೆಯ 16 ನೇ ರಾಜ್ಯ ಸಮ್ಮೇಳನವನ್ನು ಇತ್ತಿಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದಿದ್ದು ರಾಜ್ಯದಲ್ಲಿನ ಶೈಕ್ಷಣಿಕ ಮತ್ತು ಜನರ ಸಮಸ್ಯೆಗಳ ಈಡೇರಿಕೆಗಾಗಿ 16 ನಿರ್ಣಯಗಳು ಮತ್ತು ಕೋಲಾರ ಜಿಲ್ಲೆಯ ನೀರಾವರಿ, ಸರ್ಕಾರಿ ಮೆಡಿಕಲ್ ಕಾಲೇಜು, ಸೇರಿದಂತೆ ಜ್ವಲಂತ ಸಮಸ್ಯೆಗಳ ವಿರುದ್ದ ಧ್ವನಿ ಎತ್ತಲು ತೀರ್ಮಾನಿಸಲಾಗಿದೆ, 20 ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು 51 ಜನರ ನೂತನ ರಾಜ್ಯ ಸಮಿತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ನೂತನ ರಾಜ್ಯ ಅಧ್ಯಕ್ಷರಾಗಿ ಕೋಲಾರದ ಅಂಬ್ಲಿಕಲ್ ಶಿವಪ್ಪ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಮೈಸೂರು ವಿಜಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಲಾವಣ್ಯ, ಜಿಲ್ಲಾ ಸಹಕಾರ್ಯದರ್ಶಿ, ಹರ್ಷಿತ ಮುಖಂಡರಾದ ಅರ್ಚಿತಾ ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

9 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago