Categories: ಕೋಲಾರ

ಶಿಕ್ಷಣದ ಖಾಸಗೀಕರಣದ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟಕ್ಕೆ ಸಿದ್ಧ- ಅಂಬ್ಲಿಕಲ್ ಶಿವಪ್ಪ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುವ ಮೂಲಕ ಖಾಸಗೀಕರಣ ಮಾಡಲು ಹೊರಟಿದ್ದು ಇದರ ವಿರುದ್ದವಾಗಿ ಎಸ್ಎಫ್ಐ ಸಂಘಟನೆಯು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಇದ್ದು ನಿರಂತರ ಹೋರಾಟಕ್ಕೆ ಸಿದ್ದವಿದೆ ಎಂದು ಸಂಘಟನೆಯ ನೂತನ ರಾಜ್ಯ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಶೈಕ್ಷಣಿಕ ಕ್ಷೇತ್ರವು ಶ್ರೀಮಂತರ ಪಾಲಾಗುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ವಿದ್ಯಾರ್ಥಿಗಳು ಚಳವಳಿಯ ಮೂಲಕ ಸಮಾನ ಶಿಕ್ಷಣಕ್ಕಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.

ಸಮಾನ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಗಳು ಬಜೆಟ್‌ನಲ್ಲಿ ಅಗತ್ಯ ಹಣ ಮೀಸಲಿರಿಸಬೇಕು.ಎಲ್ಲ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಮತ್ತು ಮೂಲ ಸೌಲಭ್ಯಕ್ಕೆ ಉತ್ತೇಜನ ನೀಡಬೇಕು. ಸಂವಿಧಾನದ ಆಶಯದಂತೆ ವಿವಿಧತೆಯಲ್ಲಿ ಏಕತೆಯ ಸೌಹಾರ್ದ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ ಯಾವುದೇ ರೀತಿಯ ತಾರತಮ್ಯವಿಲ್ಲದ ಶೈಕ್ಷಣಿಕ ವಾತಾವರಣದ ನಿರ್ಮಾಣವಾಗಬೇಕು ಖಾಸಗಿ ರಂಗದಲ್ಲಿ ಮೀಸಲಾತಿಗೆ ಒತ್ತಾಯ. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಐಕ್ಯತೆ ಉಳಿವಿಗಾಗಿ ಯೋಜನೆ ರೂಪಿಸುವುದು ಸಮ್ಮೇಳನದ ಮುಖ್ಯ ಧ್ಯೇಯಗಳಾಗಿವೆ ಎಂದು ತಿಳಿಸಿದರು.

ಸಂಘಟನೆಯ 16 ನೇ ರಾಜ್ಯ ಸಮ್ಮೇಳನವನ್ನು ಇತ್ತಿಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದಿದ್ದು ರಾಜ್ಯದಲ್ಲಿನ ಶೈಕ್ಷಣಿಕ ಮತ್ತು ಜನರ ಸಮಸ್ಯೆಗಳ ಈಡೇರಿಕೆಗಾಗಿ 16 ನಿರ್ಣಯಗಳು ಮತ್ತು ಕೋಲಾರ ಜಿಲ್ಲೆಯ ನೀರಾವರಿ, ಸರ್ಕಾರಿ ಮೆಡಿಕಲ್ ಕಾಲೇಜು, ಸೇರಿದಂತೆ ಜ್ವಲಂತ ಸಮಸ್ಯೆಗಳ ವಿರುದ್ದ ಧ್ವನಿ ಎತ್ತಲು ತೀರ್ಮಾನಿಸಲಾಗಿದೆ, 20 ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು 51 ಜನರ ನೂತನ ರಾಜ್ಯ ಸಮಿತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ನೂತನ ರಾಜ್ಯ ಅಧ್ಯಕ್ಷರಾಗಿ ಕೋಲಾರದ ಅಂಬ್ಲಿಕಲ್ ಶಿವಪ್ಪ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಮೈಸೂರು ವಿಜಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಲಾವಣ್ಯ, ಜಿಲ್ಲಾ ಸಹಕಾರ್ಯದರ್ಶಿ, ಹರ್ಷಿತ ಮುಖಂಡರಾದ ಅರ್ಚಿತಾ ಇದ್ದರು.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

6 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago