Categories: ಕೋಲಾರ

ಶಿಕ್ಷಣದ ಖಾಸಗೀಕರಣದ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟಕ್ಕೆ ಸಿದ್ಧ- ಅಂಬ್ಲಿಕಲ್ ಶಿವಪ್ಪ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುವ ಮೂಲಕ ಖಾಸಗೀಕರಣ ಮಾಡಲು ಹೊರಟಿದ್ದು ಇದರ ವಿರುದ್ದವಾಗಿ ಎಸ್ಎಫ್ಐ ಸಂಘಟನೆಯು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಇದ್ದು ನಿರಂತರ ಹೋರಾಟಕ್ಕೆ ಸಿದ್ದವಿದೆ ಎಂದು ಸಂಘಟನೆಯ ನೂತನ ರಾಜ್ಯ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಶೈಕ್ಷಣಿಕ ಕ್ಷೇತ್ರವು ಶ್ರೀಮಂತರ ಪಾಲಾಗುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ವಿದ್ಯಾರ್ಥಿಗಳು ಚಳವಳಿಯ ಮೂಲಕ ಸಮಾನ ಶಿಕ್ಷಣಕ್ಕಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.

ಸಮಾನ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಗಳು ಬಜೆಟ್‌ನಲ್ಲಿ ಅಗತ್ಯ ಹಣ ಮೀಸಲಿರಿಸಬೇಕು.ಎಲ್ಲ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಮತ್ತು ಮೂಲ ಸೌಲಭ್ಯಕ್ಕೆ ಉತ್ತೇಜನ ನೀಡಬೇಕು. ಸಂವಿಧಾನದ ಆಶಯದಂತೆ ವಿವಿಧತೆಯಲ್ಲಿ ಏಕತೆಯ ಸೌಹಾರ್ದ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ ಯಾವುದೇ ರೀತಿಯ ತಾರತಮ್ಯವಿಲ್ಲದ ಶೈಕ್ಷಣಿಕ ವಾತಾವರಣದ ನಿರ್ಮಾಣವಾಗಬೇಕು ಖಾಸಗಿ ರಂಗದಲ್ಲಿ ಮೀಸಲಾತಿಗೆ ಒತ್ತಾಯ. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಐಕ್ಯತೆ ಉಳಿವಿಗಾಗಿ ಯೋಜನೆ ರೂಪಿಸುವುದು ಸಮ್ಮೇಳನದ ಮುಖ್ಯ ಧ್ಯೇಯಗಳಾಗಿವೆ ಎಂದು ತಿಳಿಸಿದರು.

ಸಂಘಟನೆಯ 16 ನೇ ರಾಜ್ಯ ಸಮ್ಮೇಳನವನ್ನು ಇತ್ತಿಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದಿದ್ದು ರಾಜ್ಯದಲ್ಲಿನ ಶೈಕ್ಷಣಿಕ ಮತ್ತು ಜನರ ಸಮಸ್ಯೆಗಳ ಈಡೇರಿಕೆಗಾಗಿ 16 ನಿರ್ಣಯಗಳು ಮತ್ತು ಕೋಲಾರ ಜಿಲ್ಲೆಯ ನೀರಾವರಿ, ಸರ್ಕಾರಿ ಮೆಡಿಕಲ್ ಕಾಲೇಜು, ಸೇರಿದಂತೆ ಜ್ವಲಂತ ಸಮಸ್ಯೆಗಳ ವಿರುದ್ದ ಧ್ವನಿ ಎತ್ತಲು ತೀರ್ಮಾನಿಸಲಾಗಿದೆ, 20 ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು 51 ಜನರ ನೂತನ ರಾಜ್ಯ ಸಮಿತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ನೂತನ ರಾಜ್ಯ ಅಧ್ಯಕ್ಷರಾಗಿ ಕೋಲಾರದ ಅಂಬ್ಲಿಕಲ್ ಶಿವಪ್ಪ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಮೈಸೂರು ವಿಜಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಲಾವಣ್ಯ, ಜಿಲ್ಲಾ ಸಹಕಾರ್ಯದರ್ಶಿ, ಹರ್ಷಿತ ಮುಖಂಡರಾದ ಅರ್ಚಿತಾ ಇದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

20 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago