ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ಕುಮಟಾದ ವಾಹನದ ಮೇಲೆ ಸಿನಿಮೀಯ ರೀತಿ ದರೋಡೆ ಯತ್ನ!

ಕುಮಟಾ: ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ನಡೆದ ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧವನ್ನು ಕೈಯಲ್ಲಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಿದ್ದವೇ ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಸಮಾಧಾನದಲ್ಲಿ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದೆ.

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

ಪ್ರಯಾಣಿಕರಿಗೆ ಎಚ್ಚರಿಕೆ:

ಶಿರಡಿ, ಅಯೋಧ್ಯೆ ಸೇರಿದಂತೆ ಉತ್ತರ ಭಾರತಕ್ಕೆ ಪ್ರವಾಸ ಹೋಗುವವರು, ವಿಶೇಷವಾಗಿ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆ ಪ್ರಯಾಣಿಸುವಾಗ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ:

 * ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಿ.

 * ಅಪರಿಚಿತ ಸ್ಥಳಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಲ್ಲಿ ವಾಹನ ನಿಲ್ಲಿಸಬೇಡಿ.

 * ಯಾರಾದರೂ ಅಪಘಾತದ ನೆಪದಲ್ಲಿ ವಾಹನ ಅಡ್ಡಗಟ್ಟಿದರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

 * ಪ್ರಯಾಣದುದ್ದಕ್ಕೂ ವಾಹನದ ಬಾಗಿಲುಗಳನ್ನು ಲಾಕ್ ಮಾಡಿಕೊಳ್ಳಿ.

 * ಅನುಮಾನಾಸ್ಪದವಾಗಿ ಯಾರಾದರೂ ಹಿಂಬಾಲಿಸುತ್ತಿದ್ದರೆ, ವಾಹನದ ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

4 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

14 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

15 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago