ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ಕುಮಟಾದ ವಾಹನದ ಮೇಲೆ ಸಿನಿಮೀಯ ರೀತಿ ದರೋಡೆ ಯತ್ನ!

ಕುಮಟಾ: ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ನಡೆದ ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧವನ್ನು ಕೈಯಲ್ಲಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಿದ್ದವೇ ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಸಮಾಧಾನದಲ್ಲಿ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದೆ.

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

ಪ್ರಯಾಣಿಕರಿಗೆ ಎಚ್ಚರಿಕೆ:

ಶಿರಡಿ, ಅಯೋಧ್ಯೆ ಸೇರಿದಂತೆ ಉತ್ತರ ಭಾರತಕ್ಕೆ ಪ್ರವಾಸ ಹೋಗುವವರು, ವಿಶೇಷವಾಗಿ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆ ಪ್ರಯಾಣಿಸುವಾಗ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ:

 * ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಿ.

 * ಅಪರಿಚಿತ ಸ್ಥಳಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಲ್ಲಿ ವಾಹನ ನಿಲ್ಲಿಸಬೇಡಿ.

 * ಯಾರಾದರೂ ಅಪಘಾತದ ನೆಪದಲ್ಲಿ ವಾಹನ ಅಡ್ಡಗಟ್ಟಿದರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

 * ಪ್ರಯಾಣದುದ್ದಕ್ಕೂ ವಾಹನದ ಬಾಗಿಲುಗಳನ್ನು ಲಾಕ್ ಮಾಡಿಕೊಳ್ಳಿ.

 * ಅನುಮಾನಾಸ್ಪದವಾಗಿ ಯಾರಾದರೂ ಹಿಂಬಾಲಿಸುತ್ತಿದ್ದರೆ, ವಾಹನದ ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

6 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

11 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

12 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

14 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

17 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago