ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ಕುಮಟಾದ ವಾಹನದ ಮೇಲೆ ಸಿನಿಮೀಯ ರೀತಿ ದರೋಡೆ ಯತ್ನ!

ಕುಮಟಾ: ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ನಡೆದ ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧವನ್ನು ಕೈಯಲ್ಲಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಿದ್ದವೇ ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಸಮಾಧಾನದಲ್ಲಿ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದೆ.

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

ಪ್ರಯಾಣಿಕರಿಗೆ ಎಚ್ಚರಿಕೆ:

ಶಿರಡಿ, ಅಯೋಧ್ಯೆ ಸೇರಿದಂತೆ ಉತ್ತರ ಭಾರತಕ್ಕೆ ಪ್ರವಾಸ ಹೋಗುವವರು, ವಿಶೇಷವಾಗಿ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆ ಪ್ರಯಾಣಿಸುವಾಗ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ:

 * ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಿ.

 * ಅಪರಿಚಿತ ಸ್ಥಳಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಲ್ಲಿ ವಾಹನ ನಿಲ್ಲಿಸಬೇಡಿ.

 * ಯಾರಾದರೂ ಅಪಘಾತದ ನೆಪದಲ್ಲಿ ವಾಹನ ಅಡ್ಡಗಟ್ಟಿದರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

 * ಪ್ರಯಾಣದುದ್ದಕ್ಕೂ ವಾಹನದ ಬಾಗಿಲುಗಳನ್ನು ಲಾಕ್ ಮಾಡಿಕೊಳ್ಳಿ.

 * ಅನುಮಾನಾಸ್ಪದವಾಗಿ ಯಾರಾದರೂ ಹಿಂಬಾಲಿಸುತ್ತಿದ್ದರೆ, ವಾಹನದ ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

18 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

21 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago