ಸೆರೆ ಮನೆಯಲ್ಲಿದ್ದ ಕೈದಿಯೋರ್ವ ಮೊಬೈಲ್ ಫೋನ್ ನನ್ನೇ ನುಂಗಿ ಹಾಕಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಕೇಳಿ ಜನರು ಶಾಕ್ ಆಗಿದ್ದಾರೆ. ಕಲ್ಲು ನುಂಗಿದೆ ಎಂದವನ ಹೊಟ್ಟೆಯಲ್ಲಿ ಮೊಬೈಲ್ ಸಿಕ್ಕಿದೆ.
ಈ ಘಟನೆ ಶಿವಮೊಗ್ಗ ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಆತನ ಹೊಟ್ಟೆಯಿಂದ ಮೊಬೈಲ್ ಹೊರತೆಗೆಯಲಾಗಿದೆ. ಶಿವಮೊಗ್ಗ ನ್ಯಾಯಾಲಯ ದೌಲತ್ ಅಲಿಯಾಸ್ ಗುಂಡ ಎಂಬಾತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಜೂನ್ 24 ರಂದು ಜೈಲಿನ ಆಸ್ಪತ್ರೆಗೆ ಸೇರಿದ್ದ ದೌಲತ್ ಅಲಿಯಾಸ್ ಗುಂಡ ಜೈಲಿನಲ್ಲಿ ನಾನು ಆಕಸ್ಮಿಕವಾಗಿ ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಈ ವೇಳೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಜೈಲುವಾರ್ಡ್ ನಲ್ಲಿ ಎಕ್ಸ್ ರೇ ಪರೀಕ್ಷೆ ನಡೆಸಿದ ವೈದ್ಯರು ದೌಲತ್ನ ಹೊಟ್ಟೆಯಲ್ಲಿ ಯಾವುದೋ ವಸ್ತು ಇರುವುದನ್ನ ಪತ್ತೆ ಹಚ್ಚಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಿದಾಗ ಈ ಕೈದಿಯ ಹೊಟ್ಟೆಯಲ್ಲಿ ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಮೊಬೈಲ್ ಫೋನ್ ಇರುವುದು ದೃಢಪಟ್ಟಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್.ಪಿ ಅವರು ತನಿಖೆ ಆರಂಭಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷೇಧಿತ ವಸ್ತು ಜೈಲಿನೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…