ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಿತ್ರ ಘಟನೆ: ಕೈದಿ ಹೊಟ್ಟೆಯಲ್ಲಿ 1 ಇಂಚು ಅಗಲ, 3 ಇಂಚು ಉದ್ದದ ಮೊಬೈಲ್ ಫೋನ್ ಪತ್ತೆ

ಸೆರೆ ಮನೆಯಲ್ಲಿದ್ದ ಕೈದಿಯೋರ್ವ ಮೊಬೈಲ್ ಫೋನ್ ನನ್ನೇ ನುಂಗಿ ಹಾಕಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಕೇಳಿ ಜನರು ಶಾಕ್ ಆಗಿದ್ದಾರೆ. ಕಲ್ಲು ನುಂಗಿದೆ ಎಂದವನ ಹೊಟ್ಟೆಯಲ್ಲಿ ಮೊಬೈಲ್​ ಸಿಕ್ಕಿದೆ.

ಈ ಘಟನೆ ಶಿವಮೊಗ್ಗ ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಆತನ ಹೊಟ್ಟೆಯಿಂದ ಮೊಬೈಲ್ ಹೊರತೆಗೆಯಲಾಗಿದೆ. ಶಿವಮೊಗ್ಗ ನ್ಯಾಯಾಲಯ ದೌಲತ್ ಅಲಿಯಾಸ್ ಗುಂಡ ಎಂಬಾತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಜೂನ್ 24 ರಂದು ಜೈಲಿನ ಆಸ್ಪತ್ರೆಗೆ ಸೇರಿದ್ದ ದೌಲತ್ ಅಲಿಯಾಸ್ ಗುಂಡ ಜೈಲಿನಲ್ಲಿ ನಾನು ಆಕಸ್ಮಿಕವಾಗಿ ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಈ ವೇಳೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಜೈಲುವಾರ್ಡ್‌ ನಲ್ಲಿ ಎಕ್ಸ್‌ ರೇ ಪರೀಕ್ಷೆ ನಡೆಸಿದ ವೈದ್ಯರು ದೌಲತ್​ನ ಹೊಟ್ಟೆಯಲ್ಲಿ ಯಾವುದೋ ವಸ್ತು ಇರುವುದನ್ನ ಪತ್ತೆ ಹಚ್ಚಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಿದಾಗ ಈ ಕೈದಿಯ ಹೊಟ್ಟೆಯಲ್ಲಿ ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಮೊಬೈಲ್ ಫೋನ್ ಇರುವುದು ದೃಢಪಟ್ಟಿದೆ.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್.ಪಿ ಅವರು ತನಿಖೆ ಆರಂಭಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷೇಧಿತ ವಸ್ತು ಜೈಲಿನೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

4 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

13 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

18 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

22 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago