ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಎಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.
ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಎಲ್ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.
ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.
ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…