ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಎಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.
ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಎಲ್ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.
ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.
ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…