ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಎಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.

ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.

ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.

ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

6 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

12 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

18 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

19 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago