ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಎಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.

ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.

ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.

ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

5 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

9 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

11 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

13 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago