ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.
ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.
ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…