ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.
ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.
ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…