ಶೀಘ್ರವೇ ಹೈನುಗಾರರಿಗೆ 5ರೂ. ಪ್ರೋತ್ಸಾಹ ಧನ: ಕೆಎಂಎಫ್ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸಕರಾತ್ಮಕ ಸ್ಪಂದನೆ-ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.

ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.

ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.

ಇದೆ ವೇಳೆ ಅತಿ ಹೆಚ್ಚು ಹಾಲು ನೀಡುವ ರೈತ ಮುನೇಗೌಡರಿಗೆ ಬಹುಮಾನ ನೀಡಲಾಯಿತು. ನಿವೃತ್ತ ಹಾಲು ಪರೀಕ್ಷಕ ನಾರಾಯಣಗೌಡ ಅವರನ್ನು ಸನ್ಮಾನಿಸಲಾಯಿತು.

ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago