ಶೀಘ್ರವೇ ಹೈನುಗಾರರಿಗೆ 5ರೂ. ಪ್ರೋತ್ಸಾಹ ಧನ: ಕೆಎಂಎಫ್ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸಕರಾತ್ಮಕ ಸ್ಪಂದನೆ-ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.

ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.

ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.

ಇದೆ ವೇಳೆ ಅತಿ ಹೆಚ್ಚು ಹಾಲು ನೀಡುವ ರೈತ ಮುನೇಗೌಡರಿಗೆ ಬಹುಮಾನ ನೀಡಲಾಯಿತು. ನಿವೃತ್ತ ಹಾಲು ಪರೀಕ್ಷಕ ನಾರಾಯಣಗೌಡ ಅವರನ್ನು ಸನ್ಮಾನಿಸಲಾಯಿತು.

ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

47 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago