ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.
ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.
ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…