ಶೀಘ್ರವೇ ಹೈನುಗಾರರಿಗೆ 5ರೂ. ಪ್ರೋತ್ಸಾಹ ಧನ: ಕೆಎಂಎಫ್ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸಕರಾತ್ಮಕ ಸ್ಪಂದನೆ-ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಳಿಗೆ ಕೆಎಂಎಫ್ ನಿರ್ದೇಶಕರ ನಿಯೋಗ ತೆರಳಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎರಡ್ಮೂರು ದಿನಗಳಲ್ಲಿ ಸಭೆ ಕರೆದು ರೈತರ ಪರವಾಗಿ ತೀರ್ಮಾನ ಕೈಗೊಳ್ಳುವ ಭರವಸೆ ಇದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಮಾದಗೊಂಡನಹಳ್ಳಿ ಮತ್ತು ಆಲಹಳ್ಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ವಾರ್ಷಿಕ ಸಭೆ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಉತ್ಪಾದಿಸಿ ಸಹಕಾರ ಸಂಘಕ್ಕೆ ನೀಡಬೇಕು ಹಾಗೂ ತಮ್ಮ ರಾಸುವಿಗೆ ಸಮತೋಲನ ಆಹಾರ ನೀಡಿ ಮತ್ತು ಹಾಲಿನಲ್ಲಿ ಕೊಬ್ಬಿನ ಅಂಶ ಇರುವಂತೆ ಹಾಲಿನ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.

ಉತ್ಪಾದಕರು ತಮ್ಮ ಮನೆ ಬಳಕೆಗೆ ಅಗತ್ಯವಾದ ಹಾಲನ್ನು ಇಟ್ಟುಕೊಂಡು, ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳು ಹಾಲಿನಲ್ಲಿ ದೊರೆಯಲಿವೆ. ಕೃಷಿಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ, ಕೋಳಿ/ಕುರಿ ಸಾಕಣೆಯಂತಹ ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ಆರ್ಥಿಕ ಸಂಷಕ್ಟಕ್ಕೆ ಒಳಗಬೇಕಗುತ್ತದೆ ಎಂದು ಎಚ್ಚರಿಸಿದರು.

ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ.ನಾಗರಾಜು ಮಾತನಾಡಿ, ಉತ್ತಮ ಗುಣಮಟ್ಟದ ಹಾಲು ಸಂಘಕ್ಕೆ ನೀಡುವಂತೆ ತಿಳಿಸಿ ಸಂಘದ ಎಲ್ಲ ಸದಸ್ಯರು ನಂದಿನಿ ಪಶು ಆಹಾರ ನಂದಿನಿ ಲವಣ ಮಿಶ್ರಣ ಬಳಕೆ ಮಾಡುವಂತೆ ಮತ್ತು ಒಕ್ಕೂಟದಿಂದ ದೊರಕುವ ವಿವಿಧ ಯೋಜನೆಗಳ ವಿವರವನ್ನು ತಿಳಿಸಿದರು.

ಇದೆ ವೇಳೆ ಅತಿ ಹೆಚ್ಚು ಹಾಲು ನೀಡುವ ರೈತ ಮುನೇಗೌಡರಿಗೆ ಬಹುಮಾನ ನೀಡಲಾಯಿತು. ನಿವೃತ್ತ ಹಾಲು ಪರೀಕ್ಷಕ ನಾರಾಯಣಗೌಡ ಅವರನ್ನು ಸನ್ಮಾನಿಸಲಾಯಿತು.

ಎಂಪಿಸಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷೆ ರಾಜಮ್ಮ, ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಮುನಿರಾಮೇಗೌಡ, ವಿಸ್ತಾರಣಾಧಿಕಾರಿ ಕುಸಮಾ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

1 hour ago

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

1 hour ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

7 hours ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

9 hours ago

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

12 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

23 hours ago