Categories: ಹವಾಮಾನ

ಶೀತಗಾಳಿ: ಇರಲಿ ಮುನ್ನೆಚ್ಚರಿಕೆ: ಅಗತ್ಯ ಮಾರ್ಗಸೂಚಿ ಇಲ್ಲಿದೆ ಓದಿ…..

ರಾಜ್ಯಾದ್ಯಾಂತ ಪ್ರಸ್ತುತ ಹೆಚ್ಚಾಗಿರುವ ತೀವ್ರ ಶೀತಗಾಳಿ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ಳನ್ನು ತಡೆಯುವ ಉದ್ದೇಶದಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

*ಶೀತ ಅಲೆ/ಗಾಳಿಯಿಂದ ಸುರಕ್ಷತೆ ಪಡೆಯಲು ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ.

* ಕೈ ಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ, ತಲೆಗೆ ಟೋಪಿ/ಮಫ್ಲರ್ ಗಳನ್ನು ಹಾಕಿಕೊಳ್ಳಿ, ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ.

* ಬಟ್ಟೆ ಒಣಗಿರಬೇಕು. ಬಟ್ಟೆ ಒದ್ದೆಯಾದರೆ (ಬೆವರಿನಿಂದ ಮಳೆಯಿಂದ ಇತ್ಯಾದಿ) ತಕ್ಷಣ ಬದಲಾಯಿಸಿ, ದೇಹವನ್ನು ಹೈಡ್ರೆಟ್ ಆಗಿಡಲು ಬೆಚ್ಚಗಿನ ದ್ರವಗಳನ್ನು (ನೀರು, ಗಿಡಮೂಲಿಕೆ ಚಹಾ ಮತ್ತು ಸೂಪ್ ಇತ್ಯಾದಿ) ನಿಯಮಿತವಾಗಿ ಕುಡಿಯಿರಿ.

* ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ದೇಹದ ಶಾಖವನ್ನು ಹೆಚ್ಚಿಸಲು ವಿಟಿಮಿನ್-ಸಿ ಸಮೃದ್ಧ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಹಾರಗಳನ್ನು ಸೇವಿಸಿ.

* ಸಾಧ್ಯವಾದಷ್ಟು ಮನೆಯೊಳಗ ಇರಿ, ವಿಶೇಷವಾಗಿ ಹೆಚ್ಚು ಚಳಿಯಿರುವ ಸಮಯದಲ್ಲಿ (ಬೆಳಗಿನ ಜಾವ ಮತ್ತು ತಡರಾತ್ರಿ) ದುರ್ಬಲರ ಬಗ್ಗೆ, ಗಮನ ಕೊಡಿ: ವೈದ್ಯರು, ಮಕ್ಕಳು ಮತ್ತು, ಶಿಶುಗಳು ಸಾಕಷ್ಟು ಬೆಚ್ಚಗಿರಲು ವಿಯಮಿತವಾಗಿ ಅವರನ್ನು ಪರಿಶೀಲಿಸಿ.

* ಹೈಪೋಥರ್ಮಿಯಾ (ನಡುಕ, ಗೊಂದಲ, ತೊದಲುವ ಮಾತು) ಮತ್ತು ಫ್ರಾಸ್ಟ್ ಬೈಟ್ (ನಿಶ್ಲೇಷತೆ, ಬಿಳಿ ಅಥವಾ ಮೇಣದಂತಹ ಚರ್ಮ) ನಂತಹ ಚಳಿ-ಸಂಬಂಧಿತ ಕಾಯಿಲೆಗಳ ಲಕ್ಷಣಗಳನ್ನು ತಿಳಿದುಕೊಳ್ಳಿ.

* ಚಳಿ ಮತ್ತು ಒಣಗಾಳಿಯಿಂದ ಚರ್ಮಬಿರುಕು ಬಿಡುವುದನ್ನು ತಡೆಯಲು ಎಣ್ಣೆ, ಪೆಟ್ರೋಲಿಯಂ, ಜೆಲ್ಲಿ ಅಥವಾ ಕ್ರೀಮ್‌ನಿಂದ ನಿಯಮಿತವಾಗಿ ಚರ್ಮವನ್ನು ತೇವಗೊಳಿಸಿ.

* ದೂರದರ್ಶನ, ರೇಡಿಯೋ ಅಥವಾ ಪತ್ರಿಕೆಗಳ ಮೂಲಕ ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ದೈನಂದಿನ ಹವಾಮಾನ ಮಾಹಿತಿಯನ್ನು ನೋಡುತ್ತೀರಿ.

*ಶೀತ ಅಲೆ/ಗಾಳಿ ಸಂದರ್ಭದಲ್ಲಿ ಮಾಡಬಾರದ ಕೆಲಸಗಳು*

* ಮದ್ಯಪಾನ ಮಾಡಬೇಡಿ. ಇದು ಬೆಚ್ಚಗಿನ ಭಾವನೆಯನ್ನು ನೀಡುತ್ತದೆ ಎಂಬುದು ಸುಳ್ಳು. ಆದರೆ ವಾಸ್ತವವಾಗಿ ನಿಮ್ಮ ದೇಹದ ಮುಖ್ಯ ತಾಪಮಾನವನ್ನು ಕಡಿಮೆ ಮಾಡುತ್ತದೆ, ಹೈಪೋಥರ್ಮಿಯಾದ ಅಪಾಯವನ್ನು ಹೆಚ್ಚಿಸುತ್ತದೆ.

* ನಡುಕವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ದೇಹವು ಶಾಖವನ್ನು ಕಳೆದುಕೊಳ್ಳುತ್ತಿದೆ ಎಂಬುದರ ಮೊದಲ ಚಿಹ್ನೆ. ತಕ್ಷಣ ಮನೆಯೊಳಗೆ ಹೋಗಿ.

* ಫ್ರಾಸ್ಟ್ ಬೈಟ್ ಅಥವಾ ಚಳಿಯಿಂದ ಮರಗಟ್ಟಿದ ಚರ್ಮದ ಪ್ರದೇಶವನ್ನು ಉಜ್ಜಬೇಡಿ ಅಥವಾ ಮಸಾಜ್ ಮಾಡಬೇಡಿ. ಇದು ತೀವ್ರವಾದ ಅಂಗಾಂಶ ಹಾನಿಯನ್ನು ಉಂಟುಮಾಡಬಹುದು.

* ಫ್ರಾಸ್ಟ್ ಬೈಟ್ ಆದ ಚರ್ಮವನ್ನು ಬೆಚ್ಚಗಾಗಿಸಲು ನೇರವಾದ, ತೀವ್ರವಾದ ಶಾಖವನ್ನು (ಹೀಟಿಂಗ್ರಾಡ್, ಬೆಂಕಿ ಅಥವಾ ಬಿಸಿನೀರು) ಬಳಸಬೇಡಿ, ಏಕೆಂದರೆ ನಿಶ್ಲೇಷಗೊಂಡ ಪ್ರದೇಶವು ಸುಲಭವಾಗಿ ಸುಟ್ಟು ಹೋಗಬಹುದು.

* ಗಾಳಿಯಿಲ್ಲದ ಮುಚ್ಚಿದ ಕೋಣೆಯಲ್ಲಿ ಕಲ್ಲಿದ್ದಲು, ಕಟ್ಟಿಗೆ ಅಥವಾ ಕ್ಯಾಂಡಲ್‌ಗಳನ್ನು ಉರಿಸಬೇಡಿ. ಇದು ಮಾರಣಾಂತಿಕ ಕಾರ್ಬನ್ ಅಂಶಕ್ಕೆ ಕಾರಣವಾಗಬಹುದು.

* ಬೆಂಕಿ ಅಥವಾ ತಾಪನ ಸಾಧನವನ್ನು ಹಾಗಾಗ ಗಮನಿಸುತ್ತಿರಿ.

* ಹೆಚ್ಚು ದೈಹಿಕ ಶ್ರಮ ಮಾಡಬೇಡಿ (ಉದಾಹರಣೆಗೆ, ತೀವ್ರವಾದ ಹೊರಾಂಗಣ ಕೆಲಸ) ಹೆಚ್ಚು ಬೆವರುವಿಕೆಯು ನಿಮ್ಮ ಬಟ್ಟೆಗಳನ್ನು ಒದ್ದೆ ಮಾಡಿ ವೇಗವಾಗಿ ತಣ್ಣಗಾಗಲು ಕಾರಣವಾಗಬಹುದು.

Ramesh Babu

Journalist

Recent Posts

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

1 hour ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

8 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

21 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

21 hours ago