Categories: ಹವಾಮಾನ

ಶೀತಗಾಳಿ: ಇರಲಿ ಮುನ್ನೆಚ್ಚರಿಕೆ: ಅಗತ್ಯ ಮಾರ್ಗಸೂಚಿ ಇಲ್ಲಿದೆ ಓದಿ…..

ರಾಜ್ಯಾದ್ಯಾಂತ ಪ್ರಸ್ತುತ ಹೆಚ್ಚಾಗಿರುವ ತೀವ್ರ ಶೀತಗಾಳಿ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ಳನ್ನು ತಡೆಯುವ ಉದ್ದೇಶದಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

*ಶೀತ ಅಲೆ/ಗಾಳಿಯಿಂದ ಸುರಕ್ಷತೆ ಪಡೆಯಲು ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ.

* ಕೈ ಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ, ತಲೆಗೆ ಟೋಪಿ/ಮಫ್ಲರ್ ಗಳನ್ನು ಹಾಕಿಕೊಳ್ಳಿ, ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ.

* ಬಟ್ಟೆ ಒಣಗಿರಬೇಕು. ಬಟ್ಟೆ ಒದ್ದೆಯಾದರೆ (ಬೆವರಿನಿಂದ ಮಳೆಯಿಂದ ಇತ್ಯಾದಿ) ತಕ್ಷಣ ಬದಲಾಯಿಸಿ, ದೇಹವನ್ನು ಹೈಡ್ರೆಟ್ ಆಗಿಡಲು ಬೆಚ್ಚಗಿನ ದ್ರವಗಳನ್ನು (ನೀರು, ಗಿಡಮೂಲಿಕೆ ಚಹಾ ಮತ್ತು ಸೂಪ್ ಇತ್ಯಾದಿ) ನಿಯಮಿತವಾಗಿ ಕುಡಿಯಿರಿ.

* ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ದೇಹದ ಶಾಖವನ್ನು ಹೆಚ್ಚಿಸಲು ವಿಟಿಮಿನ್-ಸಿ ಸಮೃದ್ಧ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಹಾರಗಳನ್ನು ಸೇವಿಸಿ.

* ಸಾಧ್ಯವಾದಷ್ಟು ಮನೆಯೊಳಗ ಇರಿ, ವಿಶೇಷವಾಗಿ ಹೆಚ್ಚು ಚಳಿಯಿರುವ ಸಮಯದಲ್ಲಿ (ಬೆಳಗಿನ ಜಾವ ಮತ್ತು ತಡರಾತ್ರಿ) ದುರ್ಬಲರ ಬಗ್ಗೆ, ಗಮನ ಕೊಡಿ: ವೈದ್ಯರು, ಮಕ್ಕಳು ಮತ್ತು, ಶಿಶುಗಳು ಸಾಕಷ್ಟು ಬೆಚ್ಚಗಿರಲು ವಿಯಮಿತವಾಗಿ ಅವರನ್ನು ಪರಿಶೀಲಿಸಿ.

* ಹೈಪೋಥರ್ಮಿಯಾ (ನಡುಕ, ಗೊಂದಲ, ತೊದಲುವ ಮಾತು) ಮತ್ತು ಫ್ರಾಸ್ಟ್ ಬೈಟ್ (ನಿಶ್ಲೇಷತೆ, ಬಿಳಿ ಅಥವಾ ಮೇಣದಂತಹ ಚರ್ಮ) ನಂತಹ ಚಳಿ-ಸಂಬಂಧಿತ ಕಾಯಿಲೆಗಳ ಲಕ್ಷಣಗಳನ್ನು ತಿಳಿದುಕೊಳ್ಳಿ.

* ಚಳಿ ಮತ್ತು ಒಣಗಾಳಿಯಿಂದ ಚರ್ಮಬಿರುಕು ಬಿಡುವುದನ್ನು ತಡೆಯಲು ಎಣ್ಣೆ, ಪೆಟ್ರೋಲಿಯಂ, ಜೆಲ್ಲಿ ಅಥವಾ ಕ್ರೀಮ್‌ನಿಂದ ನಿಯಮಿತವಾಗಿ ಚರ್ಮವನ್ನು ತೇವಗೊಳಿಸಿ.

* ದೂರದರ್ಶನ, ರೇಡಿಯೋ ಅಥವಾ ಪತ್ರಿಕೆಗಳ ಮೂಲಕ ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ದೈನಂದಿನ ಹವಾಮಾನ ಮಾಹಿತಿಯನ್ನು ನೋಡುತ್ತೀರಿ.

*ಶೀತ ಅಲೆ/ಗಾಳಿ ಸಂದರ್ಭದಲ್ಲಿ ಮಾಡಬಾರದ ಕೆಲಸಗಳು*

* ಮದ್ಯಪಾನ ಮಾಡಬೇಡಿ. ಇದು ಬೆಚ್ಚಗಿನ ಭಾವನೆಯನ್ನು ನೀಡುತ್ತದೆ ಎಂಬುದು ಸುಳ್ಳು. ಆದರೆ ವಾಸ್ತವವಾಗಿ ನಿಮ್ಮ ದೇಹದ ಮುಖ್ಯ ತಾಪಮಾನವನ್ನು ಕಡಿಮೆ ಮಾಡುತ್ತದೆ, ಹೈಪೋಥರ್ಮಿಯಾದ ಅಪಾಯವನ್ನು ಹೆಚ್ಚಿಸುತ್ತದೆ.

* ನಡುಕವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ದೇಹವು ಶಾಖವನ್ನು ಕಳೆದುಕೊಳ್ಳುತ್ತಿದೆ ಎಂಬುದರ ಮೊದಲ ಚಿಹ್ನೆ. ತಕ್ಷಣ ಮನೆಯೊಳಗೆ ಹೋಗಿ.

* ಫ್ರಾಸ್ಟ್ ಬೈಟ್ ಅಥವಾ ಚಳಿಯಿಂದ ಮರಗಟ್ಟಿದ ಚರ್ಮದ ಪ್ರದೇಶವನ್ನು ಉಜ್ಜಬೇಡಿ ಅಥವಾ ಮಸಾಜ್ ಮಾಡಬೇಡಿ. ಇದು ತೀವ್ರವಾದ ಅಂಗಾಂಶ ಹಾನಿಯನ್ನು ಉಂಟುಮಾಡಬಹುದು.

* ಫ್ರಾಸ್ಟ್ ಬೈಟ್ ಆದ ಚರ್ಮವನ್ನು ಬೆಚ್ಚಗಾಗಿಸಲು ನೇರವಾದ, ತೀವ್ರವಾದ ಶಾಖವನ್ನು (ಹೀಟಿಂಗ್ರಾಡ್, ಬೆಂಕಿ ಅಥವಾ ಬಿಸಿನೀರು) ಬಳಸಬೇಡಿ, ಏಕೆಂದರೆ ನಿಶ್ಲೇಷಗೊಂಡ ಪ್ರದೇಶವು ಸುಲಭವಾಗಿ ಸುಟ್ಟು ಹೋಗಬಹುದು.

* ಗಾಳಿಯಿಲ್ಲದ ಮುಚ್ಚಿದ ಕೋಣೆಯಲ್ಲಿ ಕಲ್ಲಿದ್ದಲು, ಕಟ್ಟಿಗೆ ಅಥವಾ ಕ್ಯಾಂಡಲ್‌ಗಳನ್ನು ಉರಿಸಬೇಡಿ. ಇದು ಮಾರಣಾಂತಿಕ ಕಾರ್ಬನ್ ಅಂಶಕ್ಕೆ ಕಾರಣವಾಗಬಹುದು.

* ಬೆಂಕಿ ಅಥವಾ ತಾಪನ ಸಾಧನವನ್ನು ಹಾಗಾಗ ಗಮನಿಸುತ್ತಿರಿ.

* ಹೆಚ್ಚು ದೈಹಿಕ ಶ್ರಮ ಮಾಡಬೇಡಿ (ಉದಾಹರಣೆಗೆ, ತೀವ್ರವಾದ ಹೊರಾಂಗಣ ಕೆಲಸ) ಹೆಚ್ಚು ಬೆವರುವಿಕೆಯು ನಿಮ್ಮ ಬಟ್ಟೆಗಳನ್ನು ಒದ್ದೆ ಮಾಡಿ ವೇಗವಾಗಿ ತಣ್ಣಗಾಗಲು ಕಾರಣವಾಗಬಹುದು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

13 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago