ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೀಲದ ಮೇಲೆ ಅನುಮಾನಗೊಂಡಿದ್ದ ಪತಿಯೊಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ, ಗಂಭೀರವಾಗಿ ಸುಟ್ಟು ಕರಕಲಾಗಿದ್ದ ಸಂತ್ರಸ್ತೆ ಏಳು ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ.
ಘಟನೆ ವಿವರ:
ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದ ನಿವಾಸಿಗಳಾದ ಜನ್ನಿ (23) ಮತ್ತು ಬಾಬು ಎಕ್ಕು ಖಾತ್ರೋಟ(29) ದಂಪತಿಗಳ ನಡುವೆ ಪತ್ನಿಯ ಶೀಲದ ಬಗ್ಗೆ ಅನುಮಾನದ ಕಾರಣದಿಂದ ನಿರಂತರವಾಗಿ ಜಗಳ ನಡೆಯುತ್ತಿತ್ತು. ಅಕ್ಟೋಬರ್ 3ರಂದು ನಡೆದ ವಾಗ್ವಾದದ ವೇಳೆ ಸಿಟ್ಟಿಗೆದ್ದ ಪತಿ ಬಾಬು, ಜನ್ನಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಬೆಂಕಿ ಹೊತ್ತಿಕೊಂಡ ಕೂಡಲೇ ಜನ್ನಿ ತನ್ನ ತವರು ಮನೆಯ ಕಡೆಗೆ ಓಡಿದ್ದು, ಮನೆಯವರು ತಕ್ಷಣ ಆಕೆಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಜನ್ನಿಯನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೇ ಜನ್ನಿ ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಸಾವು:
ಆದರೆ, ಗಂಭೀರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಜನ್ನಿ, ಅಂತಿಮವಾಗಿ ಅಕ್ಟೋಬರ್ 10ರಂದು ಮೃತಪಟ್ಟಿದ್ದಾರೆ.
ಈ ಸಂಬಂಧ ಜನ್ನಿಯ ಸಹೋದರ ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸರು ಆರೋಪಿ ಪತಿ ಬಾಬು ಎಕ್ಕು ಖಾತ್ರೋಟನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ಕ್ರೂರ ಕೃತ್ಯ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…