ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದರು.

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ತಿಳಿಸಿದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

23 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

12 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago