ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದರು.

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ತಿಳಿಸಿದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

3 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

13 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

14 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

19 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

20 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago