ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದರು.

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ತಿಳಿಸಿದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

43 minutes ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

1 hour ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

12 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

15 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

15 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

16 hours ago