ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದರು.

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ತಿಳಿಸಿದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

4 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago