ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹರೀಶ್ ರೆಡ್ಡಿ ನೇತೃತ್ವದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳ ಹೋರಾಟಗಾರರು ಪಾದಯಾತ್ರೆಗೆ ಸಾಥ್ ನೀಡಿದ್ದರು.

ಬೆಂಗಳೂರಿನ ಕೊಳಚೆ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡದೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರೋದನ್ನ ವಿರೋಧಿಸಿ ಪಾದಯಾತ್ರೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದಿಂದ ನೂರಾರು ಜನ ಹೋರಾಟಗಾರರೊಂದಿಗೆ ಬಿ.ಬಿ. ರಸ್ತೆಯಲ್ಲಿ ಪಾದಯಾತ್ರೆ ನಡೆಸಲಾಯಿತು.

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲಿನ ಶಾಸಕರು ಹೊರ ಜಿಲ್ಲೆಗಳಲ್ಲಿ ಹೋಗಿ ತೊಡೆ ತಟ್ಟುತ್ತಾರೆ ಅದೇ ಪೌರುಷವನ್ನು ನಮ್ಮ ಜಿಲ್ಲೆಯ ಕೆಲಸಗಳ ಮೇಲೆ ನೋಡಿಸಿದರೆ ನಮ್ಮ ಜಿಲ್ಲೆ ನಮ್ಮ ಜಿಲ್ಲೆಯ ಜನ ನೆಮ್ಮದಿಯಾಗಿರುತ್ತಾರೆ. ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪಾದಯಾತ್ರೆಯ ಉದ್ದಗಲಕ್ಕೂ ಮಹಿಳೆಯರು ಬಿಂದಿಗೆಗಳನ್ನು ತಲೆಯ ಮೇಲೆ ಹೊತ್ತು ಸಾಗುತ್ತಿರುವ ಎಲ್ಲರ ಕಣ್ಮನ ಸೆಳೆಯುತ್ತಿತ್ತು. ಇನ್ನು ಪಾದಯಾತ್ರೆಯ ಬಳಿಕ ಎಸಿ ಅಶ್ವಿನ್ ಗೆ ಹೋರಾಟಗಾರರು ಮನವಿ ಸಲ್ಲಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

2 hours ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

2 hours ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

14 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

19 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

20 hours ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

1 day ago